ಮಂಗಳೂರು: ಶಾಸಕರಾದ ಜೆ.ಆರ್.ಲೋಬೊ ಅವರು ಅತ್ತಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಸರ್ಕಾರದ ನೂತನ ಯೋಜನೆಯಾದ ಮಾತೃಪೂರ್ಣ ಯೋಜನೆಯನ್ನು ಉದ್ಘಾಟಿಸಿದರು.

ಗರ್ಭಿಣಿ ಹಾಗೂ ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಠಿಕ ಬಿಸಿಯೂಟ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಸರ್ಕಾರ ವಿನೂತನ ಯೋಜನೆಯನ್ನು ತಂದು ಬಡವರಿಗೂ ಈ ಯೋಜನೆಯ ಫಲ ಸಿಗಬೇಕು ಮತ್ತು ಆ ಮೂಲಕ ಬಡವರು ಪೌಷ್ಠಿಕ ಆಹಾರದ ಕೊರತೆಯಿಂದ ಉಳಿಯ ಬಾರದು ಎಂದರು.

ಸಮಾರಂಭದಲ್ಲಿ ಮಹಾನರ ಪಾಲಿಕೆ ಮೇಯರ್ ಕವಿತ ಸನಿಲ್ ಮತ್ತು ಸ್ಥಾಯಿ ಸಮಿತಿ ಸದಸ್ಯ ರವೂಫ್ ಉಪಸ್ಥಿತರಿದ್ದರು.