ಮಂಗಳೂರು: ಸರ್ಕಾರವು ಅಲ್ಪಸಂಖ್ಯಾತರ ಸೌಲಭ್ಯಗಳನ್ನು ಪಡೆಯುವಲ್ಲಿ ವಿಳಂಭ ಮಾಡಬಾರದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಬಲ್ಮಠ ಶಾಂತಿ ಕೆಥೋಡ್ರಲ್ ನಲ್ಲಿ ದ.ಕ.ಜಿಲ್ಲಾ ಅಲ್ಪಸಂಖ್ಯಾತರಿಗಾಗಿ ಸರ್ಕಾರಿ ಯೋಜನೆ ಹಾಗೂ ಸೌಲಭ್ಯಗಳ ಕುರಿತಾದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಸರ್ಕಾರ ಅಲ್ಪಸಂಖ್ಯಾತರಿಗಾಗಿ ವಿವಿಧ ಸೇವಾ ಸೌಭ್ಯಗಳನ್ನು ಜಾರಿಗೆ ತಂದಿದೆ. ಅಧಿಕಾರಿಗಳು ಈ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿ ವಿಳಂಭ ಮಾಡಬಾರದು ಎಂದು ಹೇಳಿದ ಅವರು ಸರ್ಕಾರ ಕೊಡಮಾಡಿದ ಈ ಯೋಜನೆಗಳನ್ನು ಪಡೆದು ಜೀವನವನ್ನು ಹದಗೊಳಿಸಿಕೊಳ್ಳಬೇಕು ಎಂದರು.

ಶಾಸಕ ಜೆ.ಆರ್.ಲೋಬೊ ಅವರು ಸರ್ಕಾರ ನೀಡಿರುವ ವಿವಿಧ ಸೌಲಭ್ಯಗಳ ಕುರಿತು ವಿವರಿಸಿ ಜನರು ಈ ಸೌಲಭ್ಯಗಳನ್ನು ತಮಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು ಎಂದರು. ಸಭೆಯಲ್ಲಿ ಧರ್ಮಗುರುಗಳಾದ ರಾಬಿನ್ಸನ್ ಬರ್ನಾಬಸ್, ರೆ.ಅಬ್ನೆಸ್ ಜತನ್ನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಮೂಡ ಸದಸ್ಯರಾದ ವಸಂತ್ ಬರ್ನಾಡ್, ಸ್ಥಳೀಯ ಮಂಗಳೂರು ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ನವೀನ್ ಡಿ ಸೋಜ, ಮಂಗಳೂರು ನಗರ ಬ್ಲಾಕ್ ಅಧ್ಯಕ್ಷೆ ಶಶಿಕಲಾ, ಪದ್ಮನಾಭ, ಶಾಂತಿ ಅಮ್ಮಣ್ಣ ಉಪಸ್ಥಿತರಿದ್ದರು.

ಸೌಲಭ್ಯಗಳ ಕುರಿತು ಮಹ್ಮದ್ ಫರೂಕ್ ಮಾಹಿತಿ ನೀಡಿದರು.