ನಗರದ ಕದ್ರಿ ಎಯ್ಯಾಡಿಯಲ್ಲಿ ತಾ.09.03.2018 ರಂದು ಸುಮಾರು ರೂ.4.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾರ್ಮಿಕ ಭವನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಾ ಕಳೆದ ಒಂದು ವರ್ಷದ ಹಿಂದೆ ಕಾರ್ಮಿಕ ಭವನ ಕಟ್ಟಡಕ್ಕೆ ಮಂಜೂರಾತಿ ದೊರೆತಿದೆ. ಈ ಪ್ರದೇಶದಲ್ಲಿ ಕೆಪಿಟಿ, ಐಟಿಐ, ಮಹಿಳಾ ಐಟಿಐ ಇದ್ದು, ಬಹಳಷ್ಟು ಪ್ರಯೋಜನಕಾರಿಯಾಗಲಿದೆ. ಕಾರ್ಮಿಕರ ವಿವಿಧ ಕಾರ್ಯಕ್ರಮಗಳನ್ನು ಜರಗಿಸಲಿಕ್ಕೆ ಇಲಾಖೆಗಳ ಕಾರ್ಯಕ್ರಮ ಹಾಗೂ ಕಾರ್ಮಿಕರಿಗೆ ತರಭೇತಿಯನ್ನು ಕೊಡುವಂತಹ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲಕರವಾಗಲಿದೆ. ಸುಮಾರು 50 ಸೆಂಟ್ಸ್ ಜಾಗವಿರುವ ಈ ಪ್ರದೇಶದಲ್ಲಿ ಜಿ+2 ಮಾದರಿಯಲ್ಲಿ ಕಟ್ಟಡವನ್ನು ಕಟ್ಟಲಾಗುವುದು. ಕೆಳ ಅಂತಸ್ತು ಕೂಡ ಇರುತ್ತದೆ. ಕಟ್ಟಡದ ವಿಸ್ತೀರ್ಣ 11,000 sq. ಜಿಣ ಇದೆ. ಒಂದು ವರ್ಷದ ಅವಧಿಯಲ್ಲಿ ಕಟ್ಟಡದ ಕಾಮಗಾರಿಯನ್ನು ಪೂರ್ತಿಗೊಳಿಸುವುದು ಎಂದರು.

ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆಯ ಹಣಕಾಸು ಸ್ಥಾಯೀ ಸಮಿತಿ ಅಧ್ಯಕ್ಷ ರಾಧಾಕೃಷ್ಣ, ಕೆ.ಎಸ್.ಆರ್.ಟಿ.ಸಿ ನಿರ್ದೇಶಕ ಟಿ.ಕೆ.ಸುಧೀರ್, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತ ನಾಗರಾಜ್, ಲೋಕೊಪಯೋಗಿ ಇಲಾಖೆಯ ಇಂಜಿನಿಯರ್ಗಳಾದ ರವಿಕುಮಾರ್, ದಾಸ್ ಪ್ರಕಾಶ್ ಹಾಗೂ ಮುಖಂಡರಾದ ರಮಾನಂದ ಪೂಜಾರಿ, ಚೇತನ್ ಕುಮಾರ್ ಉಪಸ್ಥಿತರಿದ್ದರು.