ಮಂಗಳೂರು: ಮಂಗಳೂರು ಕೋರ್ಟ್ ರಸ್ತೆಯ ನಿರ್ಮಾಣಕ್ಕೆ 11 ಕೋಟಿ ರೂಪಾಯಿ ವೆಚ್ಚಮಾಡಲಾಗುತ್ತಿದ್ದು ಈ ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ನಡೆಯದಿರುವುದಕ್ಕೆ ಶಾಸಕ ಜೆ.ಆರ್.ಲೋಬೊ ಅವರು ತೀವೃ ಅಸಮಾಧಾನ ವ್ಯಕ್ತಪಡಿಸಿದರು.

ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಕರೆಸಿ ಮಾತನಾಡುತ್ತಿದ್ದರು.

ಈ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವುದಕ್ಕೆ ನನಗೆ ಅತೀವ ಗತಿಯಲ್ಲಿ ನೋವಾಗಿದೆ. ಇದು ಇಷ್ಟೊತ್ತಿಗೆ ಮುಗಿಯಬೇಕಿತ್ತು. ಕಾರಣವೇನೆಂದು ತಿಳಿಸಬೇಕು ಎಂದರು.

ಲೋಕೋಪಯೋಗಿ ಇಲಾಖೆ ಮತ್ತು ಗುತ್ತಿಗೆದಾರರ ನಡುವೆ ಹೊಂದಾಣಿಕೆ ಕೊರತೆ ಇರುವುದನ್ನು ಪ್ರಸ್ತಾಪಿಸಿದ ಶಾಸಕ ಜೆ.ಆರ್.ಲೋಬೊ ಅವರು ಏನೇ ಸಮಸ್ಯೆ ಇದ್ದರೂ ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳಬೇಕು ಹೊರತು ಕಾಮಗಾರಿಯನ್ನು ವಿಳಂಭ ಮಾಡಿದರೆ ಜನರು ಪ್ರಶ್ನೆ ಮಾಡುತ್ತಾರೆ ಎಂದರು.

ತಾಂತ್ರಿಕ ತೊಂದರೆ ಇರುವುದನ್ನು ಅಧಿಕಾರಿಗಳು ಮತ್ತು ಗುತ್ತಿಗೆದಾರರು ತಿಳಿಸಿದಾಗ ಈ ಬಗ್ಗೆ ಅವರು ಖುದ್ದು ಕಾಂತರಾಜು ಅವರನ್ನು ಸಂಪರ್ಕಿಸಿ ಈ ವಿವಾದವನ್ನು ಬಗೆಹರಿಸುವಂತೆ ಹೇಳಿದರು.

ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ತಾವು ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿಯೂ, ಮುಂದಿನ ದಿನಗಳಲ್ಲಿ ಯಾವುದೇ ವಿಳಂಭವಾಗದಂತೆ ಕಾಮಗಾರಿಯನ್ನು ಮುಗಿಸುವುದಾಗಿ ಭರವಸೆ ನೀಡಿದರು.